ಸಮೂಹ ಗಾನ
ನೀವೂ ಜೊತೆಯಲ್ಲಿದ್ದೀರೆಂಬ ನಂಬಿಕೆ ನನ್ನದು…
ಇದು ನಿರಂತರ ನೋವು…
ಮತೀಯ ದ್ವೇಷ, ಮತಾಂಧತೆ, ತಮ್ಮ ಮೇಲ್ಮೆ ಸಾಧಿಸುವ ವಿಕೃತಿಗೆ ಬಲಿಯಾಗಿ ನಡೆಸುವ ಭಯೋತ್ಪಾದನೆ… ಇವೆಲ್ಲ.
ಇದು ನಮ್ಮಂಥ ಸಾಮಾನ್ಯರಲ್ಲೂ ಅಸಹನೆ ಹುಟ್ಟುಹಾಕಿಬಿಡುತ್ತದೆ. ಸಮಾಜದಲ್ಲಿ ಒಡಕು ಮೂಡಿಸಿಬಿಡುತ್ತದೆ. ಸ್ನೇಹಿತರ ನಡುವೆ ವಾಗ್ವಾದ ಶುರುವಿಟ್ಟುಕೊಳ್ಳುತ್ತದೆ. ಎಷ್ಟು ಬೇಡವೆಂದುಕೊಂಡರೂ…
ಭಾರತೀಯರು ‘ಲೋಕದ ಡೊಂಕ ನೀವೇಕೆ ತಿದ್ದುವಿರಿ?” ಎನ್ನುವ ತತ್ತ್ವದಲ್ಲಿ ನಂಬಿಕೆಯಿಟ್ಟವರು. ಈ ನಂಬಿಕೆ ಸ್ವಲ್ಪ ಅತಿಯಾಯಿತೇನೋ? ಅದಕ್ಕೇ, ಏನೇ ಘಟನೆ ನಡೆದರೂ ಅದನ್ನು ವಿರೋಧಿಸೋದನ್ನ ಬಿಟ್ಟು, ಎದುರಾಳಿಗಳ ಮೇಲೆರಗೋದು ಬಿಟ್ಟು, ತಮ್ಮೊಳಗಿನ ಕೊಳಕುಗಳನ್ನ ಬಗೆಬಗೆದು ಎರಚಾಡಿಕೊಳ್ಳುತ್ತ ಮೈಮರೆತು ಶತ್ರುಗಳಿಗೆ ಕೆಂಪು ಹಾಸು ಹಾಸಿಕೊಡುವರು. ಇತಿಹಾಸದಿಂದ ನಾವಿನ್ನೂ ಪಾಠ ಕಲಿತಿಲ್ಲ ಎನ್ನೋದಕ್ಕೆ ಇದಕ್ಕಿಂತ ಸಾಕ್ಷಿ ಬೇಕೇ?
ಸಾಮ್ರಾಟ ಅಶೋಕ ನೆನಪಾಗ್ತಾನೆ. ಅಹಿಂಸೆಯತ್ತ ಮುಖ ಮಾಡಿದ ಅಶೋಕ, ತನ್ನ ರಾಜ್ಯದ ಕಾವಲಿಗೆ ಸೈನಿಕರನ್ನಿರಿಸಿಕೊಂಡಿದ್ದ.
ನಿಜವಾಗಿಯೂ ಅವನಿಗೆ ಹಿಂಸೆ ಬೇಡವಿತ್ತು. ತನ್ನ ಪ್ರಜೆಗಳು ಶತ್ರುಗಳ ಆಕ್ರಮಣಕ್ಕೆ ಸಿಕ್ಕು ನರಳೋದೂ ಬೇಡವಾಗಿತ್ತು. ಅಹಿಂಸೆಯ ನೆವದಲ್ಲಿ ರಾಷ್ಟ್ರ ರಕ್ಷಣೆಯ ಹೊಣೆಯಿಂದ ಆತ ನುಣುಚಿಕೊಳ್ಳಲಿಲ್ಲ.
ನಮಗೂ ಯುದ್ಧ ಬೇಡ. ಹಾಗಂತ, ಮೈಮೇಲೆರಗೋ ರಣಹದ್ದುಗಳಿಗೆ ಸುಖಾಸುಮ್ಮನೆ ನಮ್ಮ ಪ್ರಾಣಗಳನ್ನ ಒಪ್ಪಿಸಬೇಕೇನು? ಈ ಯೋಚನೆ ನನ್ನನ್ನ ಗಲಿಬಿಲಿಗೊಳಿಸುತ್ತೆ. ನಮ್ಮ ನೆಮ್ಮದಿಗೆ ಗಡಿಯಲ್ಲಿ ನಿಂತ ಸಾವಿರ ಸಾವಿರ ಯೋಧರು ನಿದ್ರೆ ಬಿಟ್ಟು ಕಾಯುತ್ತಿದ್ದಾರೆನ್ನುವ ವಾಸ್ತವ, ದೇಶದೊಳಗಿನ ನನ್ನ ಜವಾಬ್ದಾರಿಯನ್ನ ಮನವರಿಕೆ ಮಾಡಿಕೊಡುತ್ತೆ. ಭ್ರಷ್ಟಾಚಾರದ, ಒಳಜಗಳಗಳ, ವಿಕೃತ ಮನಸ್ಸುಗಳ ಕೊಂಪೆಯನ್ನ ಕಾಯಲಿಕ್ಕೆ ಆ ಜೀವಗಳು ಬಲಿಯಾಗಬೇಕೇನು?
ಖಂಡಿತ ಸಲ್ಲದು. ನಮ್ಮಲ್ಲಿ ಒಗ್ಗಟ್ಟು ಮೂಡಬೇಕು. ಮತೀಯ ಭ್ರಾಂತಿಗಳು ಇಲ್ಲವಾಗಬೇಕು. ಸಿದ್ಧಾಂತಗಳ ಮೇಲಾಟ ತೊಲಗಬೇಕು. ಆಗ ಮಾತ್ರ, ನಾವೊಂದು ‘ರಾಷ್ಟ್ರ’ವಾಗಿರುವುದರ ಹೆಮ್ಮೆ ಉಳಿದುಕೊಳ್ಳುತ್ತದೆ.
ನನ್ನನ್ನು ಸ್ಕ್ಯಾನ್ ಮಾಡಿಕೊಳ್ಳುವ ಪ್ರಯತ್ನ ನಾನು ನಡೆಸಿದ್ದೇನೆ. ತಪ್ಪುಗಳಾಗದಂತೆ ಎಚ್ಚರವಹಿಸುವೆ. ಸ್ವಸ್ಥ ಸಮಾಜದ ನಿರ್ಮಾಣದಲ್ಲಿ ನೀವೂ ಜೊತೆಗಿದ್ದೀರೆಂಬ ನಂಬಿಕೆ ನನ್ನದು.
ವಂದೇ,
ಚೇತನಾ ತೀರ್ಥಹಳ್ಳಿ
8 Comments »
RSS feed for comments on this post. TrackBack URI
Leave a comment
Blog at WordPress.com. | Theme: Pool by Borja Fernandez.
Entries and comments feeds.
now, I am with you
Comment by neelanjala — December 3, 2008 #
“ಭ್ರಷ್ಟಾಚಾರದ, ಒಳಜಗಳಗಳ, ವಿಕೃತ ಮನಸ್ಸುಗಳ ಕೊಂಪೆಯನ್ನ ಕಾಯಲಿಕ್ಕೆ ಆ ಜೀವಗಳು ಬಲಿಯಾಗಬೇಕೇನು?”
idu nannannoo kaaduttiruva prashne.
Comment by Ramesh — December 5, 2008 #
ನಮ್ಮನ್ನು ಆಳ್ವಿಕೆ ಮಾಡಲು ಹೊರಟಿರುವ ರಾಜಕೀಯ ಭ್ರಷ್ಟರ ತಲೆ ಸರಿ ಆಗದ ಹೊರತು ಈ ದೇಶ ಸುಧಾರಣೆ ಕಷ್ಟ ಎನಿಸೋಲ್ಲವಾ ? ಏನೇ ಇರಲಿ ನಮ್ಮದೊಂದು ಗುಂಪು ಸದಾ ನೀವು ಹೇಳಿದ ರೀತಿಯಲ್ಲೇ ನಿರಂತರ ಯೋಚನೆ ಮಾಡುತ್ತಾ ಇತ್ತು… ಈಗಲೂ ಮುಂದೆಯೂ ಅದೇ ಹಾದಿಯಲ್ಲಿ ಸಾಗುತ್ತದೆ.
Comment by minchulli — December 27, 2008 #
ನಾವೊಂದು ಗ್ರೂಪ್ ಆಗಿ ಬ್ಲಾಗು ಶುರು ಮಾಡಿದ್ದೆವು, ಇದೇ ಉದ್ದೇಶವಿಟ್ಟುಕೊಂಡು. ಅದು ನಿಮ್ಮ ಆಶಯಕ್ಕೆ ಕೂಡ ಹೊಂದುತ್ತದೆ ಅಂತ ನನಗನಿಸುತ್ತದೆ, ನೋಡಿ. http://naagarika.blogspot.com. ಹಳೆಯ ಕಮೆಂಟು ಡಿಲೀಟ್ ಮಾಡಿ.
Comment by ಶ್ರೀ — December 29, 2008 #
“ಏನೇ ಘಟನೆ ನಡೆದರೂ ಅದನ್ನು ವಿರೋಧಿಸೋದನ್ನ ಬಿಟ್ಟು, ಎದುರಾಳಿಗಳ ಮೇಲೆರಗೋದು ಬಿಟ್ಟು, ತಮ್ಮೊಳಗಿನ ಕೊಳಕುಗಳನ್ನ ಬಗೆಬಗೆದು ಎರಚಾಡಿಕೊಳ್ಳುತ್ತ ಮೈಮರೆತು ಶತ್ರುಗಳಿಗೆ ಕೆಂಪು ಹಾಸು ಹಾಸಿಕೊಡುವರು. ಇತಿಹಾಸದಿಂದ ನಾವಿನ್ನೂ ಪಾಠ ಕಲಿತಿಲ್ಲ ಎನ್ನೋದಕ್ಕೆ ಇದಕ್ಕಿಂತ ಸಾಕ್ಷಿ ಬೇಕೇ?”
-ಈ ಮಾತುಗಳಂತೂ ಸತ್ಯಸ್ಯ ಸತ್ಯ. ಎಲ್ಲರೂ ರಾಜಕಾರಣಿಗಳ ಹಾದೀನೇ ಹಿಡೀತಾ ಇದ್ದಾರೆ. ಒಂದು ವಿಷಯದ ಬಗ್ಗೆ ಹೋರಾಡೋದು ಬಿಟ್ಟು, ನಮ್ಮೊಳಗೆ ಜಗಳಕ್ಕೆ ತೊಡಗಿಬಿಡ್ತಾರೆ.
-ಅವಿನಾಶ್
Comment by Avi — December 30, 2008 #
ನಾವೆಲ್ಲರೂ ನಮ್ಮನ್ನು ನಾವು scan ಮಾಡಿಕೊಳ್ಳಲೇಬೇಕಾದ ಕಾಲ ಸನ್ನಿಹಿತವಾಗಿದೆ. ನಮ್ಮ ನಂಬಿಕೆಗಳನ್ನು, ನಮ್ಮ ವಿಚಾರಗಳನ್ನು, ನಮ್ಮ ಸಿದ್ಧಾಂತಗಳನ್ನು ಎಲ್ಲವನ್ನೂ ಆತ್ಮವಿಮರ್ಷೆಯ ಒರೆಗಲ್ಲಿಗೆ ಹಚ್ಚಿ ನೋಡೋಣ. ಭ್ರಷ್ಟರು ನಮ್ಮನ್ನು ಆಳುವ ನಾಯಕರಾಗಿರುವುದಕ್ಕೆ, ಮೋಸ-ವಂಚನೆಗಳನ್ನೇ ತಮ್ಮ ಕಾಯಕವನ್ನಾಗಿಸಿಕೊಂಡವರು ಅಧಿಕಾರಿಗಳಾಗಿರುವುದಕ್ಕೆ, ಸಮಾಜವನ್ನು ಕಟ್ಟಬೇಕಿರುವ ಯುವಕರು ಮತಾಂಧರಾಗಿ ಕೊಲೆಗಡುಕರಾಗುತ್ತಿರುವುದಕ್ಕೆ ನಾವೆಲ್ಲ ಪರೋಕ್ಷವಾಗಿಯೋ ಅಪರೋಕ್ಷವಾಗಿಯೋ ಖಂಡಿತವಾಗಿಯೂ ಕಾರಣರು.
~ಪದ್ಮಿನಿ
Comment by Padmini — January 9, 2009 #
ತುಂ ಹಾಥ್ ಬಢಾಕರ್ ತೊ ದೇಖೋ ಹಂ ಸಾಥ್ ಕಹಾಂ ತಕ್ ದೇತೇ ಹೈಂ
ಘಮ್ ಖಾರ್ ಹೊ ಕೋಯೀ ಸಾಥ್ ಅಗರ್ ಮುಶ್ಕಿಲ್ ರಸ್ತೆ ಕಟ್ ಜಾತೇ ಹೈಂ
Comment by ಏಜಾಝ್ — May 10, 2009 #
ನಿಜ ಮಾತು ಸ್ವಸ್ಥ ಸಮಾಜಕ್ಕೆ ಕೀಲಿ ನಮ್ಮ ಕೈಯಲ್ಲಿಯೇ ಇದೆ ಚೇತನಾ. ಆದರೆ ದಿಕ್ಕು ಕೆಟ್ಟಿರುವ ಯುವಜನಾಂಗದ ಬಗ್ಗೆ ಹೇಳಲೆ ಬೇಕಾಗಿದೆ. ಕಾಲೇಜು ಹೋಗುವ ಹುಡುಗರೂ ಕೂಡಾ ಅದು ಹೇಗೆ ಮೂಲಭೂತವಾದದ ಕಡೆ ವಾಲಿದ್ದಾರೆ. ಹೇಗೆ ಮದ ಬಂದ ಹಾಗೆ ವರ್ತಿಸುತ್ತಾರೆ. ಆತಂಕವಾಗುತ್ತೆ. ನಾವು ಸ್ವಸ್ಥವಾಗಿದ್ದು ಇವರನ್ನು ಸರಿಮಾಡುವ ಅಲ್ಲ ಸರಿದಾರಿಗೆ ತರುವ ಹೊಣೆಗಾರಿಕೆ ನಮ್ಮ ಮೇಲಿದೆ. ಖಂಡಿತವಾಗಿಯೂ ಈ ದೆಸೆಯಲ್ಲಿ ಎಲ್ಲರೂ ಕೈ ಜೋಡಿಸ ಬೇಕಿದೆ.
Comment by ಪ್ರಸಾದ್.ಜಿ — July 1, 2009 #